
ಪಾಕಿಸ್ತಾನ(Pakistan)ವು ಭಯೋತ್ಪಾದಕರನ್ನು ಸಲಹುತ್ತಿದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಕಣ್ಣಮುಂದಿದೆ. ಪಹಲ್ಗಾಮ್ ದಾಳಿಯ ಮಾಸ್ಟರ್ಮೈಂಡ್ ಸೈಫುಲ್ಲಾ ಕಸೂರಿಯನ್ನು ಪಾಕ್ ರಾಜಕಾರಣಿ ಸಮರ್ಥಿಸಿಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ನ ವಿಧಾನಸಭೆಯ ಸ್ಪೀಕರ್ ಮೊಹಮ್ಮದ್ ಖಾನ್, ಲಷ್ಕರ್-ಎ-ತೊಯ್ಬಾ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಪರವಾಗಿ ಮಾತನಾಡಿದ್ದಾರೆ. ಉಗ್ರ ಹಫೀಜ್ ಸಯೀದ್ ಪುತ್ರ ತಲ್ಹಾ ಸಯೀದ್ನೊಂದಿಗೆ ರ್ಯಾಲಿಯಲ್ಲಿ ಭಾಗವಹಿಸಿದ್ದರು.ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬರಾದ ಕಸೂರಿಯನ್ನು ಯಾವುದೇ ತನಿಖೆ ಇಲ್ಲದೆ ಆರೋಪಿಯಾಗಿ ನೋಡಬಾರದು ಎಂದು ಮಲಿಕ್ ಅಹ್ಮದ್ಖಾನ್ ಹೇಳಿದ್ದಾರೆ. ಇದಲ್ಲದೇ ಕಸೂರಿಯೊಂದಿಗಿನ ವೈಯಕ್ತಿಕ ಸಂಬಂಧಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ.1971ರಲ್ಲಿ ಪಾಕಿಸ್ತಾನ ವಿಭಜನೆಯಾದಾಗ ನನಗೆ ನಾಲ್ಕು ವರ್ಷ. ಭಾರತದ ಆಗಿನ ಪ್ರಧಾನಿ ಇಂದಿರಾಗಅಂಧಿ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಖಲೀಜ್(ಬಂಗಾಳಕೊಲ್ಲಿ)ನಲ್ಲಿ ಮುಳುಗಿಸಿರುವುದಾಗಿ ಘೋಷಿಸಿದ್ದರು. ಮೇ 10ರಂದು ನಾವು 1971ರ ಸೇಡು ತೀರಿಸಿಕೊಂಡೆವು ಎಂದು ಹೇಳಿದ್ದಾನೆ.ಭಾರತ ಮುರಿಡ್ಕಯಲ್ಲಿ ನಡೆಸಿದ ದಾಳಿಯಲ್ಲಿ ಉಗ್ರ ಮುದಾಸರ್ ಸಾವನ್ನಪ್ಪಿದ್ದನ್ನು ಉಲ್ಲೇಖಿಸಿದ್ದಾನೆ.ಆತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನನಗೆ ಅವಕಾಶವಿರಲಿಲ್ಲ. ಆತನ ಅಂತ್ಯಕ್ರಿಯೆಯ ದಿನದಂದು ನಾನು ತುಂಬಾ ಅಳುತ್ತಿದ್ದೆ ಎಂದು ಹೇಳಿದ್ದಾನೆ.
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನಿ ಗೂಢಚಾರರ ವಿರುದ್ಧ ಭಾರತೀಯ ಭದ್ರತಾ ಸಂಸ್ಥೆಗಳು ಭಾರಿ ಕಾರ್ಯಾಚರಣೆ ಆರಂಭಿಸಿವೆ. ಈ ಕಾರ್ಯಾಚರಣೆಯ ಭಾಗವಾಗಿ, ಮತ್ತೊಬ್ಬ ಪಾಕಿಸ್ತಾನಿ ಗೂಢಚಾರನನ್ನು ಬಂಧಿಸಲಾಗಿದೆ, ಈ ಬಾರಿ ಪಂಜಾಬ್ನಿಂದ ಗಗನ್ದೀಪ್ ಸಿಂಗ್ನನ್ನು ತರಣ್ ತರಣ್ನಿಂದ ಬಂಧಿಸಲಾಗಿದೆ. ಅವರು ಪಾಕಿಸ್ತಾನದ ಐಎಸ್ಐ ಮತ್ತು ಖಲಿಸ್ತಾನಿ ಭಯೋತ್ಪಾದಕ ಗೋಪಾಲ್ ಸಿಂಗ್ ಚಾವ್ಲಾ ಅವರೊಂದಿಗೆ ಸಂಪರ್ಕದಲ್ಲಿದ್ದರು.



