Uncategorized
ಮಾದಕ ವಸ್ತು ಸೇವನೆ ದುಷ್ಪರಿಣಾಮ:ವಿದ್ಯಾರ್ಥಿಗಳಿಗೆ ಅರಿವು

ಸಕಲೇಶಪುರ : ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಟರಿಣಾಮದ ಕುರಿತು ಅರಿವು ಕಾರ್ಯಕ್ರಮ ನಡೆಯಿತು
ಸಕಲೇಶಪುರ ತಾಲೋಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕ್ರಾಫರ್ಡ್ ಆಸ್ಪತ್ರೆಯ ಆರೋಗ್ಯ ಶಿಕ್ಷಣಾಧಿಕಾರಿ ರಾಣಿ, ವೈದ್ಯಾಧಿಕಾರಿ ಡಾII ಉಷಾಕಿರಣ್ ಮತ್ತು ಆರಕ್ಷಕ ಉಪ ನಿರೀಕ್ಷಕ ಕೃಷ್ಣಪ್ಪ ಇವರು ಆಗಮಿಸಿ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಿಂದುಳಿದ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಶೇಖರ್ ಆರ್, ವಿಸ್ತರಣಾಧಿಕಾರಿಗಳಾದ ಬಸನಗೌಡ ಆರ್ ಪಾಟೀಲ ಹಾಗೂ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಬೈರಪ್ಪ ಸಕಲೈಶ್ವರ್


