ಇತ್ತೀಚಿನ ಸುದ್ದಿರಾಜ್ಯ

ಯೋಗ್ಯರಾದ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ

ಯಾದಗಿರಿ: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿರುವ ಸಂದರ್ಭದಲ್ಲೇ ಕೋಡಿಶ್ರೀ ಸ್ವಾಮಿಗಳ ಭವಿಷ್ಯ ಒಂದು ರೀತಿಯಲ್ಲಿ ಸಂಚಲ ಮೂಡಿಸಿದರೆ, ಇದೀಗ ಕಾಡಸಿದ್ದೇಶ್ವರ ಮಠದ ನೊಣವಿನ ಕೆರೆ ಶ್ರೀಗಳೂ ಕೂಡಾ ಮತ್ತೊಂದು ಭವಿಷ್ಯ ನುಡಿದಿದ್ದಾರೆ.

ಯಾದಗಿರಿ ಸಮೀಪದ ಶ್ರೀಕ್ಷೇತ್ರ ಅಬ್ಬೆತುಮಕೂರಿನಲ್ಲಿ ಸಿಎಂ ಬದಲಾವಣೆ ಚರ್ಚೆ ಕುರಿತು ಅವರು ಮಾತನಾಡಿದ್ದಾರೆ. ರೈತರು, ವರ್ತಕರು ಹಾಗೂ ಸಮಸ್ತ ಸದ್ ಭಕ್ತರ ಸಂಕಲ್ಪದಂತೆ, ಆಸೆಯಂತೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಆದರೆ ಎಷ್ಟು ದಿನದಲ್ಲಿ ಅಂತ ಹೇಳಲು ಸಾಧ್ಯವಿಲ್ಲ. ನಾನೂ ಹಾಗೂ ಡಿಕೆ ಶಿವಕುಮಾರ್ ಹೋಗಿ ಪವಿತ್ರ ಗಂಗಾ ಸ್ನಾನವನ್ನು ಮಾಡಿದ್ದೇವೆ. ಅಲ್ಲಿ ಸಂಕಲ್ಪವನ್ನೂ ಮಾಡಿದ್ದೇವೆ ಎಂದು ಹೇಳಿದ್ದಾರೆ.ಶ್ರೀ ಮಠದ ಆಶೀರ್ವಾದದಿಂದ, ಯೋಗ್ಯ ವ್ಯಕ್ತಿ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ. ಈಗಲೇ ರಾಜಕಾರಣದಲ್ಲಿ ಪ್ರತಿನಿತ್ಯ ಚರ್ಚೆ ನಡೆಯುತ್ತಿದೆ. ಎಲ್ಲಾ ಭಗವಂತರ ಆಶೀರ್ವಾದ ಸಿಗಲಿ, ಎಲ್ಲರೂ ಹೇಳುವಂತೆ, ಎಲ್ಲರ ಸಂಕಲ್ಪದಂತೆ ಬಡವರ, ರೈತರ ಪ್ರೀತಿ ವಿಶ್ವಾಸ ಗಳಿಸಿ ಉತ್ತಮ ವ್ಯಕ್ತಿಯಾಗಿ ಬಾಳಲಿ ಎಂದು ಆಶೀರ್ವಾದ ಮಾಡುವುದಾಗಿ ಹೇಳಿದ್ದಾರೆ. ರಾಜ ಪ್ರತ್ಯಕ್ಷ ದೇವನಂತೆ ಡಿಕೆ ಶಿವಕುಮಾರ್ ಬಾಳಲಿ ಎಂದು ಹರಸಿದ್ದಾರೆ.ಧರ್ಮದೃಷ್ಟಿಯಿಂದ ಮಠಕ್ಕೆ ಬರುವ ಭಕ್ತರು ಅವರು. ರಾಜ ಪ್ರತ್ಯಕ್ಷ ದೇವರು ಎಂದು ನಂಬುವ ನಾವು, ಡಿಕೆಶಿಯವರಲ್ಲಿ ರಾಜಕೀಯ ಮುತ್ಸದ್ದಿತನವನ್ನು ನೋಡುತ್ತಿದ್ದೇವೆ. ಸಮಾಜದಲ್ಲಿ ಒಳ್ಳೆಯ ವ್ಯಕ್ತಿ ಆಗಿದ್ದಾರೆ. ಸೌಹಾರ್ದತೆಯ ರಾಜಪುತ್ರ ಅವರಾಗಿದ್ದು, ಸಮಾಜದ ಕಣ್ಮನಿಯಾಗಿ ಬೆಳೆಯಲಿದ್ದಾರೆ. 140 ವರ್ಷಕ್ಕೊಮ್ಮೆ ಆಗುವ ಕುಂಭಮೇಳದಲ್ಲಿ ಗಂಗಾಸ್ನಾನ ಮಾಡಿದ್ದಾರೆ, ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ನೊಣವಿನಕೆರೆ ಕಾಡಾಸಿದ್ಧೇಶ್ವರ ಮಠಾಧ್ಯಕ್ಷರಾಗಿರುವ ಡಾ. ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ 2023 ರಲ್ಲಿಯೂ ಮಂಡ್ಯದಲ್ಲಿ ಭವಿಷ್ಯ ನುಡಿದಿದ್ದರು.ಮಠದ ಪರಮಭಕ್ತರಾಗಿರುವ ಡಿಕೆಶಿ ತುಮಕೂರು ಜಿಲ್ಲೆಯ ತಿಪಟೂರಿನ ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಪರಮ ಭಕ್ತರಾಗಿರುವ ಡಿಕೆ ಶಿವಕುಮಾರ್ ಅವರು ಆಗಾಗ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡುತ್ತಿರುತ್ತಾರೆ. ಯಾವುದೇ ಪ್ರಮುಖ ನಿರ್ಧಾರ ತಳೆಯುವ ಮುನ್ನ ಅವರು ಶ್ರೀಗಳ ಬಳಿ ಕೇಳಿಯೇ ಮುಂದುವರಿಯುತ್ತಾರೆ. ಪ್ರತಿಯೊಂದು ಕಾರ್ಯತಂತ್ರ ರೂಪಿಸುವ ಮುನ್ನವೂ ಶ್ರೀಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ ಎಂದಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆ ವೇಳೆ ನೊಣವಿನಕೆರೆ ಅಜ್ಜಯ್ಯನಿಗೆ ನಮಿಸಿದ ಬಳಿಕವೇ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಫಾರಂ ಹಂಚಿದ್ದರು.


Related Articles

Leave a Reply

Your email address will not be published. Required fields are marked *

Back to top button