ಇತ್ತೀಚಿನ ಸುದ್ದಿರಾಜ್ಯ

ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಸಭೆ ಕರೆಯಲಾಗಿತ್ತು. ಸಭೆ ನಡೆಯುವ ವೇಳೆ ಎರಡು ತಂಡಗಳ ನಡುವೆ ಹೊಯ್ ಕೈಯ್ ನಡೆದಿದೆ.

ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ಉಂಟಾಗಿ ಒಂದಿಷ್ಟು ಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಸಕಾಲದಲ್ಲಿ ಗಲಾಟೆ ನಿಲ್ಲಿಸಿ ಸಭೆ ಮುಂದುವರೆಯುವಂತೆ ಮಾಡಿದರು. ಗಲಾಟೆಯ ವಿಡಿಯೋ ಇಲ್ಲಿದೆ.

ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ರೈತ ಮುಖಂಡರಾದ ಎಸ್.ಪ್ರಕಾಶ್​ ಚಂದ್ರ ಶೆಟ್ಟಿ, ಅಧಿಕಾರಿಗಳು ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮತ್ತೊಂದು ತಂಡದವರು ಅವರ ಕೈಯಿಂದ ಮೈಕ್ ಕಸಿದು ಎಳೆದಾಟ ನಡೆಸಿದರು. ಇದು ಹೊಯ್​ಕೈಗೆ ಕಾರಣವಾಯಿತು.

Related Articles

Leave a Reply

Your email address will not be published. Required fields are marked *

Back to top button